ಮಾಜಿ ಸಚಿವೆ ಉಮಾಶ್ರೀಯವರ ಕಾರು ಅಪಘಾತ: ಇಬ್ಬರು ಮೃತ್ಯು

Update: 2020-11-21 05:08 GMT

ಹುಬ್ಬಳ್ಳಿ, ನ.21: ಚಿತ್ರನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಅಪಘಾತಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬಂಡಿವಾಡ ಸಮೀಪ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಅಪಘಾತದ ವೇಳೆ ಉಮಾಶ್ರೀ ಕಾರಿನಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದ ವೇಳೆ ದುರಂತ ಸಂಭವಿಸಿದೆ. ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಉಮಾಶ್ರೀಯವರಿಗೆ ಸೇರಿದ ಕಾರು ಮತ್ತು ಹುಬ್ಬಳ್ಳಿಯಿಂದ ಗದಗದತ್ತ ಹೊರಟಿದ್ದ ಇನ್ನೊಂದು ಕಾರು ಮುಖಾಮುಖಿ ಢಿಕ್ಕಿಯಾಗಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಉಮಾಶ್ರೀಯವರ ಕಾರಿಗೆ ಢಿಕ್ಕಿಯಾದ ಇನ್ನೊಂದು ಕಾರಿನಲ್ಲಿದ್ದವರು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News