ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸಿಬಿಐ ಸಮನ್ಸ್

Update: 2020-11-21 11:32 GMT

ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.

ನಗರದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ ದ ಡಿ.ಕೆ ಶಿವಕುಮಾರ್ ಅವರು, ಬೆಂಗಳೂರು ಸಿಬಿಐ ಕಚೇರಿಯಿಂದ ಕಳೆದ ತಿಂಗಳು ಅ.5 ರಂದು ತಮ್ಮ ನಿವಾಸದ ಮೇಲೆ ನಡೆದಿದ್ದ ದಾಳಿ ಸಂಬಂಧ ತನಗೆ ನ.19ರಂದು ಸಮನ್ಸ್ ಜಾರಿಯಾಗಿರುವುದು ನಿಜ. ನ.23 ರಂದು ಹಾಜರಾಗಲು ಸೂಚಿಸಿದ್ದಾರೆ ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ಸಿಬಿಐ ನೋಟಿಸ್ ಸಮನ್ಸ್ ನೀಡಿದೆ. ನ.19ರಂದು ಮಗಳ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದರಿಂದ ಸಿಬಿಐ ಕಚೇರಿಗೆ ಹಾಜರಾಗಲಾಗಲಿಲ್ಲ ಹಾಗೂ ನ.22ರಿಂದ ಉತ್ತರ ಕರ್ನಾಟಕ ಪ್ರವಾಸದಲ್ಲಿರುವುದರಿಂದ ಅಂದು ಕೂಡ ಹಾಜರಾಗಲು ಆಗುವುದಿಲ್ಲ. ಅದರ ಬದಲಾಗಿ ನ.25 ರಂದು ಸಂಜೆ 4 ಗಂಟೆಗೆ ಸಿಬಿಐ ಕಚೇರಿ ವಿಚಾರಣೆಗೆ ಹಾಜರಾಗುವುದಾಗಿ ಮನವಿ ಮಾಡಿದ್ದು, ಇದಕ್ಕೆ ಸಿಬಿಐ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News