ನ.22ರಂದು ಹಿರೇಬೆಟ್ಟಿನಲ್ಲಿ ಕೃಷಿ, ಹೈನುಗಾರಿಕೆ ಮಾಹಿತಿ ಶಿಬಿರ

Update: 2020-11-21 11:59 GMT

ಉಡುಪಿ, ನ.21: ಉಡುಪಿ ಜಿಲ್ಲಾ ಕೃಷಿಕ ಸಂಘದ ಹಿರಿಯಡ್ಕ ವಲಯ ಸಮಿತಿ ಮತ್ತು ಪ್ರಗತಿ ಫ್ರೆಂಡ್ಸ್ ಹಿರೇಬೆಟ್ಟು ಪಟ್ಲ ನ.22ರ ರವಿವಾರ ಸಂಜೆ 4:00ಗಂಟೆಗೆ ಪಟ್ಲದ ಗಣೇಶ್ ಕ್ಯಾಶ್ಯೂ ಇಂಡಸ್ಟ್ರೀಸ್ ವಠಾರದಲ್ಲಿ ವೈಜ್ಞಾನಿಕ ಕೃಷಿ ಮತ್ತು ಹೈನುಗಾರಿಕೆ ಮಾಹಿತಿ ಶಿಬಿರವನ್ನು ಆಯೋಜಿಸಿದೆ. 

ಇದರಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಭಾಗವಹಿಸಲಿದ್ದಾರೆ. ಕಡಿಮೆ ವೆಚ್ಚದಲ್ಲಿ ಲಾಭದಾಯಕವಾಗಿ ಸಾವಯವ ಭತ್ತ, ತೆಂಗು, ಅಡಿಕೆ, ಬಾಳೆ, ಗೇರು, ಮಾವು ಮೊದಲಾದ ಬೆಳೆಗಳ ಕೃಷಿ ಮಾಡುವ ಕ್ರಮಗಳು, ಅವುಗಳ ನಾಟಿ, ಕೀಟ-ರೋಗ ಬಾಧೆಗಳ ನಿರ್ವಹಣೆ ಮತ್ತು ಹೈನುಗಾರಿಕೆ ಕುರಿತ ಸಮಗ್ರ ಮಾಹಿತಿಯನ್ನು ಶಿಬಿರದಲ್ಲಿ ನೀಡಲಾಗುವುದು ಎಂದು ಕೃಷಿಕ ಸಂಘದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News