ತಮಿಳುನಾಡಿನಲ್ಲಿ ಮುಂದುವರಿಯಲಿದೆ ಎಐಎಡಿಎಂಕೆ- ಬಿಜೆಪಿ ಮೈತ್ರಿ

Update: 2020-11-22 03:57 GMT

ಚೆನ್ನೈ, ನ.21: ತಮಿಳುನಾಡಿನಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಬಿಜೆಪಿ ಜತೆಗಿನ ಮೈತ್ರಿ ಮುಂದುವರಿಯಲಿದೆ ಎಂದು ಎಐಎಡಿಎಂಕೆ ಶನಿವಾರ ಸ್ಪಷ್ಟಪಡಿಸಿದೆ.

"ಎಐಎಡಿಎಂಕೆ-ಬಿಜೆಪಿ ವಿಜಯದ ಮೈತ್ರಿ" ಮುಂದಿನ ಚುನಾವಣೆಯಲ್ಲೂ ಇರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಎಐಎಡಿಎಂಕೆ ಸಂಯೋಜಕ ಓ.ಪನ್ನೀರ್ ಸೆಲ್ವಂ ಮತ್ತು ಜಂಟಿ ಸಂಯೋಜಕ ಎಡಪ್ಪಾಡಿ ಕೆ.ಪಳನಿಸ್ವಾಮಿ ಹೇಳಿದ್ದಾರೆ.

ನಗರದಲ್ಲಿ 67 ಸಾವಿರ ಕೋಟಿ ರೂಪಾಯಿ ಅಂದಾಜು ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಉಭಯ ಮುಖಂಡರು ಎಂಆರ್‌ಸಿ ನಗರದ ಹೋಟೆಲ್‌ನಲ್ಲಿ ರಾತ್ರಿ ತಂಗಿದ ಶಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಎಐಎಡಿಎಂಕೆ ಸರ್ಕಾರದ ಕಾರ್ಯಯೋಜನೆಗಳನ್ನು, ಅದರಲ್ಲೂ ಮುಖ್ಯವಾಗಿ ಕೋವಿಡ್-19 ಪರಿಸ್ಥಿತಿ ನಿಭಾಯಿಸಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾ, ರಾಜ್ಯ ಸರಕಾರಕ್ಕೆ ಮತ್ತು ರಾಜ್ಯದ ಜನತೆಗೆ ಎಲ್ಲ ನೆರವನ್ನು ಕೇಂದ್ರ ಸರಕಾರ ನೀಡಲಿದೆ ಎಂದು ಭರವಸೆ ನೀಡಿದರು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಅಮಿತ್ ಶಾ ಶ್ಲಾಘಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News