​ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Update: 2020-11-22 14:17 GMT

ಉಡುಪಿ, ನ.22: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸ್ತಕ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ ಸಂಸ್ಥೆಗಳಲ್ಲಿ ಉದ್ಯೋಗ ಮಾಡುತಿತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ 25,000 ರೂ. ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಫೇಕ್ಷಿಗಳು, ಅರ್ಜಿಗಳನ್ನು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಅಥವಾ ನಿಗಮದ ವೆಬ್‌ಸೈಟ್ www.dbcdc. karnataka.gov.inನಲ್ಲಿ ಪಡೆಯಬಹುದಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಡಿ.19ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ ಅಥವಾ ಉಡುಪಿ ಜಿಲ್ಲಾ ಕಚೇರಿ ದೂರ ವಾಣಿ ಸಂಖ್ಯೆ: 0820-2574882 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News