ಉಳ್ಳಾಲ: ಕಟ್ಟಡದಿಂದ ಬಿದ್ದು ಭದ್ರತಾ ಕಾವಲುಗಾರ ಮೃತ್ಯು

Update: 2020-11-22 16:40 GMT

ಉಳ್ಳಾಲ: ಭದ್ರತಾ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಬಹುಮಹಡಿ ಕಟ್ಟಡದ ಒಂಬತ್ತನೇ ಹಂತಸ್ತಿನಿಂದ ಕಾಲು ಜಾರಿ ಕೆಳಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಇಲ್ಲಿನ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್‌ಪಾಲ ಬಹುಮಹಡಿ ಕಟ್ಟಡದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ.

ಕಟ್ಟಡದ 9ನೆ ಮಹಡಿಗೆ ತೆರಳಿದ್ದ ಅವರು, ಟ್ಯಾಂಕ್ ನಲ್ಲಿ ನೀರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಅಕಸ್ಮಾತ್ ಕಾಲುಜಾರಿ ಕೆಳಗೆ ಬಿದ್ದಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News