ಜಮ್ಮುಕಾಶ್ಮೀರ: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

Update: 2020-11-22 18:28 GMT

ಜಮ್ಮು, ನ. 22: ಜಮ್ಮು ಹಾಗೂ ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಚೂಣಿ ಠಾಣೆಯ ಸಮೀಪ ಯೋಧನೋರ್ವ ರವಿವಾರ ತನ್ನ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸಾಲೂತ್ರಿ ಪ್ರದೇಶದ ಠಾಣೆಯಲ್ಲಿ ಕರ್ತವ್ಯ ನಿರತನಾಗಿದ್ದ ಹವಾಲ್ದಾರ ರಾಜಿಂದರ್ ಕುಮಾರ್ ಇಂದು ಬೆಳಗ್ಗೆ 8.25ಕ್ಕೆ ತನ್ನ ಸೇವಾ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು. ಆದರೆ, ಗಂಭೀರ ಗಾಯಗೊಂಡ ಅವರು ಬೆಳಗ್ಗೆ 10.05ಕ್ಕೆ ಮೃತಪಟ್ಟರು. ಅವರ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಅವರು ಹೇಳಿದ್ದಾರೆ. ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News