ಮಾಣಿಯಲ್ಲಿ ವಾಹನ ಅಪಘಾತ: ಕಲ್ಲಡ್ಕದ ಯುವಕ ಮೃತ್ಯು

Update: 2020-11-23 04:43 GMT

ಬಂಟ್ವಾಳ, ನ.23: ಕಾರು ಮತ್ತು ಬೈಕ್ ನಡುವೆ ಕಲ್ಲಡ್ಕದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ. 

ಕಲ್ಲಡ್ಕ ನಿವಾಸಿ, ಸಂಘಪರಿವಾರದ ಕಾರ್ಯಕರ್ತ ಯತಿರಾಜ್ (30) ಮೃತ ಯುವಕ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಓಮ್ನಿ ಕಾರು ಯತಿರಾಜ್ ಸಂಚರಿಸುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. 

ಗಂಭೀರ ಗಾಯಗೊಂಡಿದ್ದ ಯತಿರಾಜ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದ ರಭಸಕ್ಕೆ ಓಮ್ನಿ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ನಿಂತಿದೆ. ಕಾರು ಚಾಲಕ ಕೆಲವು ಹೊತ್ತು ಹೊರಬರಲಾಗದೆ ಕಾರಿನೊಳಗೆ ಸಿಲುಕಿಕೊಂಡಿದ್ದ. ಕಾರು ಸಂಪೂರ್ಣ ಜಖಂಗೊಂಡಿದೆ. 

ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News