ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕೆ.ಜಯಪ್ರಕಾಶ್ ಹೆಗ್ಡೆ ನೇಮಕ

Update: 2020-11-23 14:49 GMT

ಬೆಂಗಳೂರು, ನ.23: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2014ರ ಜೂನ್‍ನಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನಾಗಿ ಎಚ್.ಕಾಂತರಾಜ್ ಅವರನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ನೇಮಕ ಮಾಡಿತ್ತು. ಆದರೆ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಚಾಲನೆ ನೀಡಿದ್ದ ಆಯೋಗವು ತನ್ನ ಅಂತಿಮ ವರದಿಯನ್ನು ಸಲ್ಲಿಸುವ ಸಿದ್ಧತೆ ನಡೆಸುತ್ತಿದ್ದರಿಂದ, 2017ರ ಜುಲೈನಲ್ಲಿ ಅವರ ಅಧಿಕಾರಾವಧಿಯನ್ನು ರಾಜ್ಯ ಸರಕಾರ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದಲ್ಲಿಯೂ ಕಾಂತರಾಜ್ ಮುಂದುವರಿದಿದ್ದರು. ಆದರೆ, 2019ರ ಸೆಪ್ಟಂಬರ್ ನಲ್ಲಿ ಅವರು ಜವಾಬ್ದಾರಿಯಿಂದ ಮುಕ್ತರಾದರು. ಅಲ್ಲಿಂದ ಸುಮಾರು ಒಂದು ವರ್ಷ ಎರಡು ತಿಂಗಳುಗಳ ಕಾಲ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಬಿಜೆಪಿ ಸರಕಾರ ಅಧ್ಯಕ್ಷರ ನೇಮಕ ಮಾಡಿರಲಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News