ಕಾಂಗ್ರೆಸ್ ಮುಖಂಡ ಬಾಲಕೃಷ್ಣ ರೈ ನಿಧನ

Update: 2020-11-23 14:26 GMT

ಪುತ್ತೂರು : ಹಿರಿಯ ಕಾಂಗ್ರೆಸ್ ಮಖಂಡ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಬಾಲಕೃಷ್ಣ ರೈ(70) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೋಮವಾರ ನಿಧನರಾದರು.

ಹಿರಿಯ ಕಾಂಗ್ರೆಸಿಗರಾಗಿದ್ದ ಅವರು ಒಳಮೊಗ್ರು ಗ್ರಾಮ ಪಂಚಾಯತ್‍ನಲ್ಲಿ ಹಲವು ವರ್ಷಗಳ ಕಾಲ ಸದಸ್ಯರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News