ಐಎಂಎ ಬಹುಕೋಟಿ ವಂಚನೆ ಪ್ರಕರಣ: ಬಿಡಿಎ ಅಧಿಕಾರಿ ಪಿ.ಡಿ.ಕುಮಾರ್ ಬಂಧನ
Update: 2020-11-23 14:44 GMT
ಬೆಂಗಳೂರು, ನ.23: ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ಮನ್ಸೂರ್ ಖಾನ್ ಹಣವನ್ನು ರಿಯಲ್ ಎಸ್ಟೇಟ್ನಲ್ಲೂ ಹೂಡಿಕೆ ಮಾಡಿದ್ದ. ಈ ನಡುವೆ, ಮನ್ಸೂರ್ ಖಾನ್ ಬಳಿ 3-4 ಕೋಟಿ ರೂಪಾಯಿ ಪಡೆದಿದ್ದ ಕುಮಾರ್ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದರು.
ಪಿ.ಡಿ.ಕುಮಾರ್ ಅವರನ್ನು ಬಂಧಿಸಿದ ಬಳಿಕ ಸಿಬಿಐ ಅಧಿಕಾರಿಗಳು ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮೂರು ದಿನ ಸಿಬಿಐ ಕಸ್ಟಡಿಗೆ ನೀಡಿ ಆದೇಶಿಸಿದೆ.
ಈ ಹಿಂದೆ ಮನ್ಸೂರ್ ಅಲಿ ಖಾನ್ ತನಿಖಾ ತಂಡಕ್ಕೆ ರಿಯಲ್ ಎಸ್ಟೇಟ್ ವ್ಯವಹಾರದ ಹಣ ಹೂಡಿಕೆ ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಪಿ.ಡಿ.ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.