ವಿರೋಧ ಪಕ್ಷದ ಅಪಪ್ರಚಾರಗಳಿಗೆ ವಾಸ್ತವತೆ ಅರಿತು ಪ್ರತ್ಯುತ್ತರ: ರಘುಪತಿ ಭಟ್

Update: 2020-11-23 16:12 GMT

ಉಡುಪಿ, ನ.23: ಬಿಜೆಪಿ ನೇತೃತ್ವದ ಸರ್ಕಾರಗಳು ಅಭಿವೃದ್ಧಿ ವಿಚಾರದಲ್ಲಿ ರಾಜಿ ಮಾಡಿಕೊಂಡಿಲ್ಲ ಮತ್ತು ರಾಜಕೀಯ ಕೂಡ ಮಾಡಿಲ್ಲ. ವಿರೋಧ ಪಕ್ಷದವರು ಮಾಡುವ ಅಪಪ್ರಚಾರಗಳಿಗೆ ಕಾರ್ಯಕರ್ತರು ವಾಸ್ತವತೆ ಅರಿತು ಪ್ರತ್ಯುತ್ತರ ನೀಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ನ.22ರಂದು ಉಡುಪಿ ಜಿಲ್ಲಾ ಬಿಜೆಪಿ ಪ್ರಶಿಕ್ಷಣ ಪ್ರಕೋಷ್ಠ, ನಗರ ಮಂಡಲ ಪ್ರಶಿಕ್ಷಣ ವರ್ಗದ ಸಮಾರೋಪ ಸಮಾರಂಭದಲ್ಲಿ ಭಾವಹಿಸಿ ಅವರು ಮಾತನಾಡುತಿದ್ದರು.

ಕೆಲವರು ಉಡುಪಿಯಲ್ಲಿ ಸಾವಿರಾರು ಕೋಟಿ ಅಭಿವೃದ್ಧಿ ಮಾಡಿದ ಬಗ್ಗೆ ಮಾತನಾಡುತ್ತಾರೆ. ಆದರೆ ಅವರ ಕಾಲದಲ್ಲಿ ಒಂದೇ ಒಂದು ಹೊಸ ಯೋಜನೆ ಅನುಷ್ಠಾನಗೊಂಡಿಲ್ಲ. ರಸ್ತೆ ಅಗಲೀಕರಣ ಆಗಲಿಲ್ಲ. ಭೂಸ್ವಾಧೀನ ಪ್ರಕ್ರಿಯೆಗಳು ನಡೆದಿಲ್ಲ. ಪ್ರಸ್ತುತ ಹೊಸ ಯೋಜನೆಗಳು, ರಸ್ತೆ ಅಗಲೀಕರಣ ಭೂಸ್ವಾಧೀನ ಪ್ರಕ್ರಿಯೆಗಳು ನಡೆಯುತ್ತಿವೆ. ಅಭಿವೃದ್ಧಿಯೇ ನ್ಮು ಮೂಲ ಮಂತ್ರವಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ರಾಜ್ಯ ಪ್ರಶಿಕ್ಷಣ ಪ್ರಕೋಷ್ಠದ ಸದಸ್ಯೆ ಡಾ.ಮಂಜುಳಾ ರಾವ್ ಮಂಗಳೂರು, ಜಿಲ್ಲಾ ಪ್ರಶಿಕ್ಷಕ ಪ್ರಕೋಷ್ಠದ ಸಂಚಾಲಕ ರಘುವೀರ್ ಶಣೈ, ನಗರ ಪ್ರಶಿಕ್ಷಣ ಪ್ರಕೋಷ್ಠಕ ಲೋಕಯ್ಯ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News