ಅತಿಥಿ ಉಪನ್ಯಾಸಕರ ಸೇವೆ ವರ್ಷದ ಮಟ್ಟಿಗೆ ಮುಂದುವರಿಸಿ ರಾಜ್ಯ ಸರಕಾರ ಆದೇಶ

Update: 2020-11-23 16:37 GMT

ಬೆಂಗಳೂರು, ನ.23: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ 2019-20ನೇ ಸಾಲಿನಲ್ಲಿ ಕಾರ್ಯನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಸೇವೆಯನ್ನು 2020-21ನೇ ಸಾಲಿಗೂ ಮುಂದುವರಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಕೋವಿಡ್‌-19 ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸೇವೆ ಅಗತ್ಯವಾಗಿದ್ದು, ಹೀಗಾಗಿ ಅವರನ್ನು ಇನ್ನೊಂದು ಅವಧಿಗೆ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News