ಮಂಗಳೂರು: ಯುವಕನ ಮೇಲೆ ತಲವಾರು ದಾಳಿ

Update: 2020-11-23 18:06 GMT

ಮಂಗಳೂರು : ನಗರದ ಯುನಿಟಿ ಆಸ್ಪತ್ರೆ ಸಮೀಪ ಯುವಕನ ಮೇಲೆ ತಲವಾರು ದಾಳಿ ನಡೆದಿದೆ.

ಸೋಮವಾರ ರಾತ್ರಿ ಈ ದಾಳಿ ನಡೆದಿದ್ದು, ನೌಶಾದ್ (30) ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಕಂದಾವರ ಮಸೀದಿ ಸಮೀಪ ಚೂರಿ ಇರಿತಕ್ಕೊಳಗಾಗಿದ್ದ ಅಬ್ದುಲ್ ಅಝೀಝ್ ಅವರ ಅಳಿಯ ನೌಶಾದ್ ಅವರ ಮೇಲೆ ತಲವಾರಿನಿಂದ  ದಾಳಿ ಮಾಡಲಾಗಿದೆ. ಅವರ ಎದೆ ಭಾಗಕ್ಕೆ ಗಾಯವಾಗಿದ್ದು, ಕಾರಿನಲ್ಲಿ ಬಂದಿದ್ದ ತಂಡ ಈ ದಾಳಿ ನಡೆಸಿರುವುದಾಗಿ ಹೇಳಲಾಗುತ್ತಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News