ಐಎಂಎ ಬಹುಕೋಟಿ ವಂಚನೆ ಪ್ರಕರಣ: ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ನೋಟಿಸ್

Update: 2020-11-24 12:44 GMT

ಬೆಂಗಳೂರು, ನ.24: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದು, ವಿಚಾರಣೆ ಹಾಜರಾಗುವಂತೆ ಸೂಚಿಸಿದ್ದಾರೆ.

ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‍ನಿಂದ ಅಜಯ್ ಹಿಲೋರಿ ಕಿಕ್ ಬ್ಯಾಕ್ ಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ ಐಎಂಎಯಿಂದ ವಂಚನೆಗೆ ಒಳಗಾದ ಜನರ ಅಹವಾಲು ಸ್ವೀಕರಿಸದೇ ಮನ್ಸೂರ್ ಖಾನ್‍ಗೆ ಸಹಕರಿಸಿದ್ದರು ಎಂಬ ಆರೋಪವೂ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಹಿಲೋರಿಗೆ ನೋಟೀಸ್ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News