ಕನ್ನಡಿಗರ ಮನದಲ್ಲಿ ಅಂಬರೀಶ್ಗೆ ಶಾಶ್ವತ ಸ್ಥಾನ: ಮುಖ್ಯಮಂತ್ರಿ ಯಡಿಯೂರಪ್ಪ
Update: 2020-11-24 14:06 GMT
ಬೆಂಗಳೂರು, ನ.24: ಕನ್ನಡ ಚಿತ್ರರಂಗ ಕಂಡ ಹಿರಿಯ ಕಲಾವಿದ, ಜನಪ್ರಿಯ ನಾಯಕ ನಟ, ಅಭಿಮಾನಿಗಳ ಪ್ರೀತಿಯ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುಣ್ಯತಿಥಿಯಂದು ಗೌರವಪೂರ್ವಕ ಸ್ಮರಣೆಗಳು. ನೇರ ನಡೆ, ನುಡಿಗಳ ತಮ್ಮ ವೈಶಿಷ್ಟ್ಯಪೂರ್ಣ ವ್ಯಕ್ತಿತ್ವದ ಮೂಲಕ ಅಂಬರೀಶ್ ಕನ್ನಡಿಗರ ಮನದಲ್ಲಿ ಶಾಶ್ವತ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.