ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಭೆ
Update: 2020-11-24 15:12 GMT
ಉಡುಪಿ, ನ.24: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಗುತ್ತಿಗೆದಾರರ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯುವ ಉದ್ದೇಶದಿಂದ ನ.28ರಂದು ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ಉಡುಪಿ ಜಿಲ್ಲಾ ಶಾಖೆಯ ವಿಶೇಷ ಸಭೆಯನ್ನು ನ.28ರರಂದು ಬೆಳಗ್ಗೆ 11 ಗಂಟೆಗೆ ಆದಿ ಉಡುಪಿಯಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದೆ. ಜಿಲ್ಲೆಯ ಎಲ್ಲಾ ಎಸ್ಸಿ, ಎಸ್ಟಿ ಗುತ್ತಿಗೆದಾರರು ಇದರಲ್ಲಿ ಭಾಗವಹಿಸುವಂತೆ ಸಂಘದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.