ಸಿಎಂ ಬಿಎಸ್‍ವೈ-ಪುತ್ರ ವಿಜಯೇಂದ್ರ ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ವಿ.ಎಸ್ ಉಗ್ರಪ್ಪ ಆರೋಪ

Update: 2020-11-24 15:58 GMT

ಬಳ್ಳಾರಿ, ನ.24: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರು ಭಾರೀ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಅವರಿಗೇನಾದರೂ ತಾಕತ್ತಿದ್ದರೆ ನ್ಯಾಯಾಂಗ ತನಿಖೆ ಎದುರಿಸಲಿ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಸವಾಲೆಸೆದಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲು ಚೆಕ್ ಮೂಲಕ ಲಂಚ ಪಡೆದ ಆರೋಪವನ್ನು ಸಿಎಂ ಬಿಎಸ್ ಯಡಿಯೂರಪ್ಪ ಎದುರಿಸಿದ್ದರು. ಈಗ ಆರ್‍ಟಿಜಿಎಸ್ ಮೂಲಕ ಹಣ ಪಡೆದಿರುವ ದಾಖಲೆಗಳಿವೆ. ನಿಮಗೇನಾದರೂ ಯೋಗ್ಯತೆ ಇದ್ದರೆ ನ್ಯಾಯಾಂಗ ತನಿಖೆ ಎದುರಿಸಲು ಸಿದ್ಧರಾಗಿ. ಅಲ್ಲಿ ನೀವು ಭ್ರಷ್ಟಾಚಾರದಲ್ಲಿ ತೊಡಗಿಲ್ಲ ಎಂಬ ಆರೋಪವೇನಾದರೂ ಸಾಬೀತಾದರೆ ನಾನು ನಿಮ್ಮ ಮನೆಯ ಆಳಾಗಿ ದುಡಿಯುವೆ ಎಂದು ಹೇಳಿದ್ದಾರೆ.

ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷ ವಿಜಯೇಂದ್ರ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ಮೇಲಾಗಿ, ಅವರು ಯುವಕರಿದ್ದಾರೆ. ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವಾಗ ನಾಲಗೆ ಬಿಗಿಹಿಡಿದು ಮಾತನಾಡಬೇಕು. 150 ವರ್ಷದ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುವ ಹಕ್ಕು ನಿಮಗೇನಿದೆ ಹೇಳಿ ಎಂದು ಅವರು ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News