ಮಹಿಳೆಯ ಕರಿಮಣಿ ಸರ ಸುಲಿಗೆ

Update: 2020-11-24 16:28 GMT

ಪಡುಬಿದ್ರಿ, ನ.24: ಪಣಿಯೂರು ಕುಂಜೂರು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರವನ್ನು ಅಪರಿಚಿತ ವ್ಯಕ್ತಿಯೊಬ್ಬ ಸುಲಿಗೆ ಮಾಡಿ ಪರಾರಿಯಾಗಿರುವ ಘಟನೆ ನ.24ರಂದು ಮಧ್ಯಾಹ್ನ ವೇಳೆ ನಡೆದಿದೆ.

ಕುಂಜೂರಿನ ಶಕುಂತಳ ಎಂಬವರು ಉಚ್ಚಿಲ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಪಡೆದು ವಾಪಾಸು ಮನಗೆ ರಿಕ್ಷಾದಲ್ಲಿ ಬಂದು ಒಬ್ಬರೇ ನಡೆದುಕೊಂಡು ಹೋಗುತ್ತಿದ್ದರು. ಆಗ ಅವರ ಹಿಂಬದಿಯಿಂದ ಬೈಕಿನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಕುತ್ತಿಗೆಗೆ ಕೈ ಹಾಕಿ ಚಿನ್ನದ ಕರಿಮಣಿಸರವನ್ನು ಎಳೆದನು. ಈ ವೇಳೆ ಕರಿಮಣಿ ಸರವು ತುಂಡಾಗಿ ಸುಮಾರು 10 ಗ್ರಾಂ ತೂಕದ ಕರಿಮಣಿಸರವನ್ನು ಆ ವ್ಯಕ್ತಿ ಕಿತ್ತು ಕೊಂಡು ಪರಾರಿಯಾದನು. ಈ ಬಗ್ಗೆ ಪಡು ಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News