ಎನ್‌ಡಿಎ ಶಾಸಕರನ್ನು ಸೆಳೆಯಲು ಲಾಲೂ ಪ್ರಸಾದ್ ಯತ್ನ: ಸುಶೀಲ್ ಮೋದಿ ಆರೋಪ

Update: 2020-11-25 06:35 GMT

ಪಾಟ್ನಾ: ನಿತೀಶ್ ಕುಮಾರ್ ನೇತೃತ್ವದ ಸರಕಾರವನ್ನು ಕೆಡವಿ ತನ್ನ ಆರ್‌ಜೆಡಿ ಪಕ್ಷವನ್ನುರಾಜ್ಯದಲ್ಲಿ ಅಧಿಕಾರಕ್ಕೆ ತರಲು ಲಾಲೂ ಪ್ರಸಾದ್ ಯಾದವ್ ಅವರು ಎನ್‌ಡಿಎ ಶಾಸಕರನ್ನು ತನ್ನತ್ತ ಸೆಳೆಯುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಮಂಗಳವಾರ ಆರೋಪಿಸಿದ್ದಾರೆ.

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಟ್ವಿಟರ್‌ನಲ್ಲಿ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಲಾಲೂ ಪ್ರಸಾದ್ ಅವರ ಮೊಬೈಲ್ ನಂಬರ್‌ನ್ನು ಹಂಚಿಕೊಂಡಿದ್ದಾರೆ.

"ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹೊರತಾಗಿಯೂ ಅವರು ರಾಂಚಿಯಿಂದ ಎನ್‌ಡಿಎ ಶಾಸಕರಿಗೆ ಮೊಬೈಲ್ ಕರೆ ಮಾಡಿ ಸಚಿವ ಸ್ಥಾನ ನೀಡುವ ಭರವಸೆ ನೀಡುತ್ತಿದ್ದಾರೆ. ನಾನು ಆ ನಂಬರ್‌ಗೆ ಕರೆ ಮಾಡಿದಾಗ ಲಾಲೂ ಅವರೇ ಖುದ್ದಾಗಿ ಕರೆ ಸ್ವೀಕರಿಸಿದರು. ನೀವು ಜೈಲಿನಲ್ಲಿ ಕುಳಿತುಕೊಂಡು ಇಂತಹ ಕೊಳಕು ರಾಜಕೀಯ ಮಾಡಬೇಡಿ. ಇದರಲ್ಲಿ ನೀವು ಯಶಸ್ವಿಯಾಗುವುದಿಲ್ಲ ಎಂದು ನಾನು ಅವರಿಗೆ ಹೇಳಿದ್ದೇನೆ'' ಎಂದು ಸುಶೀಲ್ ಮೋದಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News