ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

Update: 2020-11-25 12:32 GMT

ಉಡುಪಿ, ನ.25: ಜಿಲ್ಲೆಯಲ್ಲಿ ಕೋಟ್ಪಾ 2003 ಕಾಯ್ದೆಯನ್ನು ಅನುಷ್ಠಾನ ಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿ ಯಿಂದ ಮಣಿಪಾಲ ವ್ಯಾಪ್ತಿಯ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೇಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ದಾಳಿ ನಡೆಸಿ 24 ಪ್ರಕರಣ ಗಳನ್ನು ದಾಖಲಿಸಿ 4500ರೂ. ದಂಡ ವಸೂಲಿ ಮಾಡಲಾಗಿದೆ.

ದಾಳಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಾಸುದೇವ್, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ, ಆಹಾರ ಸುರಕ್ಷತಾ ಅಧಿಕಾರಿ ವೆಂಕಟೇಶ್, ಹಿರಿಯ ಆರೋಗ್ಯ ಸಹಾಯಕ ದೇವಪ್ಪ ಪಟಗಾರ್, ತಾಲೂಕು ದೈಹಿಕ ಪರೀವೀಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ಹಿರಿಯ ಆರೋಗ್ಯ ನಿರೀಕ್ಷಕ ಕರುಣಾರ ವಿ, ಜಿಲ್ಲಾ ಕಾರ್ಮಿಕ ನಿರೀಕ್ಷಕ ಪ್ರವೀಣ್ ಕುಮಾರ್, ರಾಷ್ಟೀಯ ತಂಬಾಕು ನಿಯಂತ್ರಣಾ ಘಟಕದ ವತಿಯಿಂದ ಎನ್‌ಟಿಸಿಪಿ ಜಿಲ್ಲಾ ಸಲಹೆಗಾರ ಮಂಜುಳಾ ಶೆಟ್ಟಿ ಮತ್ತು ಮಣಿಪಾಲ ಪೊಲೀಸ್ ಠಾಣಾ ಆರಕ್ಷಕರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News