ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಸಿಬಿಐ ವಿಚಾರಣೆ ಎದುರಿಸಿದ ಡಿ.ಕೆ.ಶಿವಕುಮಾರ್

Update: 2020-11-25 15:08 GMT

ಬೆಂಗಳೂರು, ನ.25: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಒಂದು ಗಂಟೆ ಕಾಲ ಸಿಬಿಐ ವಿಚಾರಣೆ ಎದುರಿಸಿದರು.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಡಿಕೆಶಿ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬುಧವಾರ ಮಧ್ಯಾಹ್ನ 3.55ಕ್ಕೆ ಗಂಗಾನಗರದ ಸಿಬಿಐ ಕಚೇರಿಗೆ ಡಿಕೆಶಿ ಆಗಮಿಸಿದ್ದಾದರೂ ಕಾಂಗ್ರೆಸ್ ಪ್ರಭಾವಿ ನಾಯಕ ಅಹ್ಮದ್ ಪಟೇಲ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. 

ಹೀಗಾಗಿ, ಹೋಗಲು ಅವಕಾಶ ಕೊಡಿ ಎಂದ ಸಿಬಿಐ ಅಧಿಕಾರಿಗಳಿಗೆ ಡಿಕೆಶಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಡಿಕೆಶಿಯನ್ನು ಒಂದು ತಾಸು ಮಾತ್ರವೇ ವಿಚಾರಣೆ ನಡೆಸಿ ಕಳುಹಿಸಿಕೊಟ್ಟರು.

ಅ.5ರಂದು ಡಿ.ಕೆ.ಶಿವಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಕೆಲ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದರು. 74.93 ಕೋಟಿ ರೂ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಡಿಕೆಶಿ ಮೇಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News