ನ. 27: ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನದ ಉದ್ಘಾಟನೆ

Update: 2020-11-25 17:36 GMT

ಮಂಗಳೂರು : ಯುನಿವೆಫ್ ಕರ್ನಾಟಕ ಇದರ 15 ನೇ ವರ್ಷದ “ಅರಿಯಿರಿ ಮನುಕುಲದ ಪ್ರವಾದಿಯನ್ನು” ಎಂಬ ಪ್ರವಾದಿ ಸಂದೇಶ ಪ್ರಚಾರ ಅಭಿಯಾನವನ್ನು ನ. 27 ರಿಂದ 2021 ರ ಜನವರಿ 29 ರ ತನಕ “ಸಾಮಾಜಿಕ ತಾರತಮ್ಯ ಮತ್ತು ಪ್ರವಾದಿ ಮುಹಮ್ಮದ್ (ಸ)” ಎಂಬ ಕೇಂದ್ರೀಯ ವಿಷಯದಲ್ಲಿ ಆಯೋಜಿಸಲಾಗಿದ್ದು ಈ ಅಭಿಯಾನದ ಉದ್ಘಾಟನೆಯು ನ. 27 ರ  ಸಂಜೆ 6.30 ಕ್ಕೆ ಕಂಕನಾಡಿಯ ಜಮೀಯತುಲ್ ಫಲಾಹ್ ಹಾಲ್ ನಲ್ಲಿ ಜರಗಲಿದೆ.

ಹಿದಾಯ ಫೌಂಡೇಶನ್ ಇದರ ಅಧ್ಯಕ್ಷ  ಮನ್ಸೂರ್ ಆಝಾದ್, ಮುಸ್ಲಿಮ್ ಜಸ್ಟಿಸ್ ಫೋರಂ ಅಧ್ಯಕ್ಷ ಡಾ. ಅಮೀರ್ ತುಂಬೆ ಹಾಗೂ ನಂಡೆ ಪೆಙಳ್ ಅಭಿಯಾನದ ಅಧ್ಯಕ್ಷ  ಎ.ಎಚ್. ನೌಷಾದ್ ಸುರಲ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುನಿವೆಫ್ ಅಧ್ಯಕ್ಷ  ರಫೀಉದ್ದೀನ್ ಕುದ್ರೋಳಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅಭಿಯಾನದ ಸಂಚಾಲಕ ಅರ್ಶಲನ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News