ಕುದ್ರೋಳಿ: ರೌಡಿ ಶೀಟರ್ ನ ಬರ್ಬರ ಹತ್ಯೆ

Update: 2020-11-26 07:07 GMT

ಮಂಗಳೂರು, ನ.26: ಬೊಕ್ಕಪಟ್ಣದ ರೌಡಿ ಶೀಟರ್ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕುದ್ರೋಳಿ ಸಮೀಪದ ಕರ್ನಲ್‌ ಗಾರ್ಡನ್ ಬಳಿ ನಡೆದಿದೆ.

ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (29) ಹತ್ಯೆಗೊಳಗಾದವರು ಎಂದು ತಿಳಿದುಬಂದಿದೆ.

ಈತ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 ಬುಧವಾರ ತಡರಾತ್ರಿಯಿಂದ ಗುರುವಾರ ನಸುಕಿನ ಜಾವದೊಳಗೆ ಈ ಹತ್ಯೆ‌ ನಡೆದಿದೆಯೆನ್ನಲಾಗಿದೆ.

ಇಂದ್ರಜಿತ್ ನನ್ನು‌ ಮಾರಕ ಆಯುಧಗಳಿಂದ ಕೊಚ್ಚಿ ಕೊಲೆ ಮಾಡಿ ಗಾರ್ಡನ್ ಬಳಿ ಎಸೆಯಲಾಗಿದ್ದು, ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ.

ಈ ಬಗ್ಗೆ ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ಇನ್ನಷ್ಟೇ ಹೆಚ್ಚಿನ‌ ಮಾಹಿತಿ ತಿಳಿದುಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News