ಕಾರ್ಮಿಕ ಸಂಘಟನೆಗಳ ರಾಷ್ಟ್ರೀಯ ಮುಷ್ಕರ ಕರೆಗೆ ಕಾಸರಗೋಡಿನಲ್ಲಿ ಉತ್ತಮ ಸ್ಪಂದನ

Update: 2020-11-26 05:55 GMT

ಕಾಸರಗೋಡು, ನ.26: ಕೇಂದ್ರ ಸರಕಾರದ ಕೃಷಿ - ಕಾರ್ಮಿಕ ವಿರೋಧಿ ಧೋರಣೆಗಳನ್ನು ಪ್ರತಿಭಟಿಸಿ ಕಾರ್ಮಿಕ ಸಂಘಟನೆಗಳು  ಕರೆ ನೀಡಿರುವ ರಾಷ್ಟ್ರೀಯ ಮುಷ್ಕರಕ್ಕೆ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರಗಳಲ್ಲಿ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಕೆಲವೇ ಕೆಲ ಖಾಸಗಿ ವಾಹನಗಳು ಮಾತ್ರ ಸಂಚರಿಸುತ್ತಿವೆ. ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಮುಷ್ಕರ ಅಷ್ಟೇನೂ ಪರಿಣಾಮ ಬೀರಿಲ್ಲ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಖಾಸಗಿ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.
ಜಿಲ್ಲೆಯ ಸರಕಾರಿ ಕಚೇರಿಗಳಲ್ಲೂ ಹಾಜರಾತಿ ಕಡಿಮೆ ಇದೆ. ಸ್ಥಳೀಯಾಡಳಿತ ಚುನಾವಣಾ ಸಂಬಂಧಿ ಕಚೇರಿಗಳಲ್ಲಿ ಹಾಜರಾತಿ ಎಂದಿನಂತೆ ಇವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News