ಉಗ್ರರ ದಾಳಿ: ಇಬ್ಬರು ಯೋಧರು ಹುತಾತ್ಮ

Update: 2020-11-26 11:49 GMT

 ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಹೊರವಲಯದ ಎಚ್‌ಎಂಟಿ ಪ್ರದೇಶದ ಸಮೀಪ ಉಗ್ರರು ನಡೆಸಿರುವ ದಾಳಿಗೆ ಭಾರತದ ಇಬ್ಬರು ಯೋಧರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

 ಸೇನೆಯ ಗಸ್ತು ತಂಡದ ಭಾಗವಾಗಿದ್ದ ಸೈನಿಕರ ಮೇಲೆ ಉಗ್ರರು ಗುಂಡಿನ ಸುರಿಮಳೆಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

"ಮೂವರು ಉಗ್ರರು ನಮ್ಮ ಸೇನೆಯ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದು, ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದರು. ಬಳಿಕ ಗಾಯದಿಂದಾಗಿಯೇ ಮೃತಪಟ್ಟರು. ಜೈಶ್ ಉಗ್ರ ಸಂಘಟನೆ ಈ ಪ್ರದೇಶದಲ್ಲಿ ಸಕ್ರಿಯವಾಗಿದ್ದು,ಸಂಜೆ ವೇಳೆ ಉಗ್ರ ಸಂಘಟನೆಯನ್ನು ಖಂಡಿತವಾಗಿಯೂ ಪತ್ತೆ ಹಚ್ಚುವೆವು. ಉಗ್ರರು ಕಾರಿನಲ್ಲಿ ಪರಾರಿಯಾಗಿದ್ದಾರೆ. ಅವರಲ್ಲಿ ಇಬ್ಬರು ಪಾಕಿಸ್ತಾನಿ ಹಾಗೂ ಓರ್ವ ಸ್ಥಳೀಯನಾಗಿರಬೇಕು'' ಎಂದು ಹಿರಿಯ ಪೊಲೀಸ್ ಅಧಿಕಾರಿಯ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಎಎನ್ ಐ ವರದಿ ಮಾಡಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News