ನ.29ರಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಉಡುಪಿಗೆ

Update: 2020-11-26 13:23 GMT

ಉಡುಪಿ, ನ.26: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನ.29ರಂದು ಉಡುಪಿ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

29ರ ಬೆಳಗ್ಗೆ 9 ಗಂಟೆಗೆ ಕೊಲ್ಲೂರು ಮೂಕಾಂಬಿಕಾ ದೇವಿಯ ದರ್ಶನ ಮುಗಿಸಿ 10:45ಕ್ಕೆ ಉಡುಪಿಗೆ ಆಗಮಿಸುವ ಡಿಕೆಶಿ, 11 ಗಂಟೆಗೆ ಉಡುಪಿ ಮಿಷನ್ ಆಸ್ಪತ್ರೆ ಬಳಿ ಇರುವ ಬಾಸೆಲ್ ಮಿಷನರೀಸ್ ಮೆಮೋರಿಯಲ್ ಅಡಿಟೋರಿಯಂನಲ್ಲಿ ನಡೆಯುವ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿರುವರು.

ನಂತರ ಅಪರಾಹ್ನ 2 ಕ್ಕೆ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಹಾಗೂ ವಿವಿಧ ಮುಂಚಾಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿರುವರು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News