ಕಾಸರಗೋಡು : ಬೈಕ್ - ಆಟೋರಿಕ್ಷಾ ನಡುವೆ ಢಿಕ್ಕಿ ; ಓರ್ವ ಮೃತ್ಯು
Update: 2020-11-26 15:53 GMT
ಕಾಸರಗೋಡು : ದ್ವಿಚಕ್ರ ವಾಹನ ಹಾಗೂ ಆಟೋ ರಿಕ್ಷಾ ನಡುವೆ ಉಂಟಾದ ಅಪಘಾತದಲ್ಲಿ ಓರ್ವ ಮೃತ ಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡು ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಹನಫಿ ಬಝಾರ್ ನಲ್ಲಿ ಗುರುವಾರ ಸಂಜೆಯ ಸುಮಾರಿಗೆ ನಡೆದಿದೆ.
ಮೃತರನ್ನು ಚೆರ್ಕಳ ಮಾಸ್ತಿಕುಂಡು, ಪೊವ್ವಲ್ ನಿವಾಸಿ ಮಸೂದ್ (25) ಎಂದು ಗುರುತಿಸಲಾಗಿದೆ. ಜೊತೆಗಿದ್ದ ಸಂದೀಪ್ ಉನ್ನಿ (24) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಜೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.