ಸಮಾಲೋಚಿಸಿ ನಿರ್ಧಾರ: ಲಾಲಾಜಿ ಮೆಂಡನ್

Update: 2020-11-26 15:50 GMT

ಕಾಪು, ನ.26: ಕರ್ನಾಟಕ ಮಾರ್ಕೆಟಿಂಗ್ ಕಮ್ಯುನಿಕೇಶನ್ ಮತ್ತು ಅಡ್ವರ್ಟೈಸಿಂಗ್ ನಿಗಮದ ಅಧ್ಯಕ್ಷನನ್ನಾಗಿ ಸರಕಾರ ನೇಮಕ ಮಾಡಿರುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಮಾಡಿಲ್ಲ. ಸಂಸ್ಥೆಯ ಬಗ್ಗೆ ಪರಿಶೀಲಿಸಿ ಹಿರಿಯ ರೊಂದಿಗೆ ಸಮಾಲೋಚಿಸಿ ಮುಂದಿನ ನಿರ್ಧಾರ ತೆಗೆದು ಕೊಳ್ಳಲಾಗು ವುದು ಎಂದು ಕಾಪು ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಲಾಲಾಜಿ ಆರ್. ಮೆಂಡನ್ ಅವರಿಗೆ ಹಿರಿತನದ ಮೇಲೆ ಹಾಗೂ ಮೊಗವೀರ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕಳೆದ ಕೆಲವು ದಿನಗಳಿಂದ ಕೇಳಿ ಬರುತ್ತಿದ್ದು, ಈ ಮಧ್ಯೆ ಸರಕಾರ ಇವರನ್ನು ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಮೂಲಕ ಲಾಲಾಜಿ ಅವರ ಸಚಿವ ಸ್ಥಾನದ ಆಕಾಂಕ್ಷಿತನಕ್ಕೆ ಸರಕಾರ ಬ್ರೇಕ್ ಹಾಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News