ಕೆರೆಗೆ ಬಿದ್ದು ಮೃತ್ಯು

Update: 2020-11-26 15:56 GMT

ಕಾರ್ಕಳ, ನ. 26: ತೆಂಗಿನ ಗರಿಯನ್ನು ಹೆಕ್ಕಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ನ.25ರಂದು ಸಂಜೆ ವೇಳೆ ಈದು ಗ್ರಾಮದ ವರಿಮಾರು ಎಂಬಲ್ಲಿ ನಡೆದಿದೆ.

ಮೃತರನ್ನು ಗಿರಿಯಪ್ಪ ಪೂಜಾರಿ(55) ಎಂದು ಗುರುತಿಸಲಾಗಿದೆ. ಇವರು ಮನೆಯ ಬಳಿಯ ಕೆರೆಬದಿಯಲ್ಲಿ ಬಿದ್ದಿರುವ ತೆಂಗಿನ ಗರಿಯನ್ನು ಹೆಕ್ಕಲು ಹೋದಾಗ ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News