ಯಕ್ಷಾಂಗಣದಿಂದ 8ನೇ ವರ್ಷದ ನುಡಿಹಬ್ಬ : ಹರಿಕೃಷ್ಣ ಪುನರೂರ್‌ಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ

Update: 2020-11-26 16:03 GMT

ಮಂಗಳೂರು, ನ. 26: ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ ‘ಯಕ್ಷಾಂಗಣ’ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆಯು 8ನೇ ಕನ್ನಡ ನುಡಿ ಹಬ್ಬದ ಪ್ರಯುಕ್ತ ಏರ್ಪಡಿಸಿರುವ ’ಯಕ್ಷಗಾನ ತಾಳಮದ್ದಳೆ ಪರ್ವ’ ವೇಳೆ ಶ್ರೇಷ್ಠ ಸಾಧಕರಿಗೆ ನೀಡಲಾಗುವ 2019-20ನೆ ಸಾಲಿನ ‘ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ’ಕ್ಕೆ ಅವಿಭಜಿತ ದ.ಕ. ಜಿಲ್ಲೆಯ ಧಾರ್ಮಿಕ, ಸಾಮಾಜಿಕ ನೇತಾರ, ಉದ್ಯಮಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಆಯ್ಕೆಯಾಗಿದ್ದಾರೆ ಎಂದು ಯಕ್ಷಾಂಗಣದ ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.

ನ.29ರಂದು ನಗರದ ಶಕ್ತಿನಗರ ಶ್ರೀಗೋಪಾಲಕೃಷ್ಣ ದೇವಸ್ಥಾನದ ನೂತನ ’ಪಾರಿಜಾತ’ ಸಭಾಂಗಣದಲ್ಲಿ ನಡೆಯುವ ಯಕ್ಷಾಂಗಣದ ಎಂಟನೆಯ ನುಡಿಹಬ್ಬದಲ್ಲಿ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೆ ಶಾಸಕ ವೇದವ್ಯಾಸ ಕಾಮತ್ ಪ್ರಶಸ್ತಿ ಪ್ರದಾನ ಮಾಡುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News