ಶಕ್ತಿನಗರ ಪಪೂ ಕಾಲೇಜು ಸ್ಥಾಪನೆ: ಶಾಸಕ ಕಾಮತ್

Update: 2020-11-26 16:04 GMT

ಮಂಗಳೂರು, ನ.26: ನಗರದ ಶಕ್ತಿನಗರದ ನಾಲ್ಯಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಹೊರಡಿ ಸಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.

ಶಾಸಕನಾಗಿ ಆಯ್ಕೆಯಾದಾಗಲೇ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ. ಆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಳಿಯೂ ಚರ್ಚಿಸಿದ್ದೆ. ಇದೀಗ ಸರಕಾರವು ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದೆ ಎಂದಿದ್ದಾರೆ.

ಶಕ್ತಿನಗರ ಪರಿಸರದ ವಿದ್ಯಾರ್ಥಿಗಳು ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ ಜನರ ಬೇಡಿಕೆಯನ್ನು ಈಡೇರಿಸುವ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ. ಒಬ್ಬ ಶಾಸಕನಾಗಿ ಜನರಿ--ಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಸದ್ಯ ನಾಲ್ಯಪದವಿ ನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಪ್ರಾರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣ ಕ್ಕಾಗಿ ಯೋಜನೆ ರೂಪಿಸಲಾಗುವುದು ಎಂದು ಶಾಸಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News