ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರ ಸಾವು

Update: 2020-11-26 17:21 GMT

ಮಂಡ್ಯ, ನ.26: ಅಪರಿಚಿತ ವಾಹನ ಢಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ಕೆ.ಎಂ.ದೊಡ್ಡಿ ಬಳಿ ನಡೆದಿದೆ.

ಮದ್ದೂರು ತಾಲೂಕು ಗುಡಿಗೆರೆ ಗ್ರಾಮದ ಪದ್ಮನಾಭ(21) ಸಾವನ್ನಪ್ಪಿದವ. ಈತ ಮಂಡ್ಯದಲ್ಲಿ ಮದುವೆ ಮುಗಿಸಿಕೊಂಡು ಗ್ರಾಮಕ್ಕೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಕೆ.ಎಂ.ದೊಡ್ಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News