ಮಂಗಳೂರು : ಗೋಡೆಯಲ್ಲಿ ಉಗ್ರರ ಪರ ಝಿಂದಾಬಾದ್ ಬರಹ !
Update: 2020-11-27 05:02 GMT
ಮಂಗಳೂರು, ನ. 27: ನಗರದ ಬಿಜೈ ರಸ್ತೆಯ ಗೋಡೆಯೊಂದರಲ್ಲಿ 'ಲಷ್ಕರ್ ಝಿಂದಾಬಾದ್' ಎಂದು ಬರೆದಿರುವುದು ಬೆಳಕಿಗೆ ಬಂದಿದೆ.
ಕದ್ರಿ ಪೊಲೀಸ್ ಠಾಣೆ ಸಮೀಪದ ಬಿಜೈ ಬಳಿಯ ರಸ್ತೆಯ ಗೋಡೆಯೊಂದರಲ್ಲಿ ಬರೆಯಲಾಗಿರುವ ಬರಹದಲ್ಲಿ "ನಮ್ಮನ್ನು ವಿದ್ವಂಸಕ ಕೃತ್ಯ ನಡೆಸಲು ಉತ್ತೇಜಿಸಲು ಬರಬೇಡಿ, ಲಷ್ಕರ್ ಇ ತೊಯಿಬಾ ಮತ್ತು ತಾಲಿಬಾನ್ ಗಳಿಗೆ ಸಂಘಿಗಳನ್ನು ಯಾವ ರೀತಿ ನೋಡಿಕೊಳ್ಳಬೇಕು ಎನ್ನುವುದು ತಿಳಿದಿದೆ. ಅಲ್ಲದೆ ಲಷ್ಕರ್ ಝಿಂದಾಬಾದ್ ಎಂದು ಬರೆಯಲಾಗಿದೆ.
ಇದು ಮಧ್ಯರಾತ್ರಿ ಕಿಡಿಗೇಡಿಗಳು ನಡೆಸಿರುವ ಕೃತ್ಯ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಆಗಮಿಸಿದ ಕದ್ರಿ ಪೊಲೀಸರು ಗೋಡೆ ಬರಹಗಳನ್ನು ಅಳಿಸಿ ಹಾಕಿ ತನಿಖೆ ನಡೆಸುತ್ತಿದ್ದಾರೆ.