ಬೆಳ್ತಂಗಡಿ : ವಿದ್ಯುತ್ ಆಘಾತಕ್ಕೆ ಕಾರ್ಮಿಕ ಬಲಿ

Update: 2020-11-27 11:35 GMT

ಬೆಳ್ತಂಗಡಿ : ಕಳೆಂಜ ಗ್ರಾಮದ  ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಆಘಾತಕ್ಕೆ ಓರ್ವ ಕಾರ್ಮಿಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ.

ಪ್ರತಾಪ್ ಮೂಡಬಿದ್ರೆ (20) ಅವರು ವಿದ್ಯುತ್ ಅವಘಡದಿಂದ ಮೃತರು ಎಂದು ಗುರುತಿಸಲಾಗಿದೆ. ನಾಗಪ್ಪ ಮೂಡಬಿದ್ರೆ ಹಾಗೂ ಕಿಶೋರ್ ಮೂಡಬಿದ್ರೆ ಗಾಯಗೊಂಡಿದ್ದಾರೆ.

ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭ ಕಾರ್ಯನಿರ್ವಹಿಸುತ್ತಿದ್ದ ಪ್ರತಾಪ್ ಅವರಿಗೆ ವಿದ್ಯುತ್ ಕಂಬದಲ್ಲಿ ಇರುವಾಗಲೇ ವಿದ್ಯುತ್ ಶಾಕ್ ತಗುಲಿ, ಅವರು ಅಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News