ರಾಜೀನಾಮೆ ನೀಡಿದ ಟಿಎಂಸಿಯ ಹಿರಿಯ ನಾಯಕ: ‘ನಿಮಗೆ ಸ್ವಾಗತ’ ಎಂದ ಬಿಜೆಪಿ ನಾಯಕ

Update: 2020-11-27 12:05 GMT

ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್ ನ ಹಿರಿಯ ನಾಯಕ ಸುವೇಂದು ಅಧಿಕಾರಿ ಇಂದು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಸಲ್ಲಿಸಲಾಗಿದೆ.

ಪ್ರವಾಸೋದ್ಯಮ ಸಚಿವ ಸ್ಥಾನಕ್ಕೆ ಅಧಿಕಾರಿ ರಾಜೀನಾಮೆ ಸಲ್ಲಿಸಿದ್ದರೂ, ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಇನ್ನೂ ಸಲ್ಲಿಸಿಲ್ಲ. ಈಗಾಗಲೇ ಪಕ್ಷಕ್ಕೆ ಸೇರ್ಪಡೆಯಾಗುವುದಕ್ಕೆ ಸ್ವಾಗತ ಎಂದು ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ದಿಲೀಪ್ ಘೋಷ್ ಹೇಳಿದ್ದು, ಸುವೇಂದು ಅಧಿಕಾರಿ ಕೇಸರಿ ಪಕ್ಷ ಸೇರ್ಪಡೆಯಾಗುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News