ಮೆಸ್ಕಾಂ ಮಣಿಪಾಲ ಉಪವಿಭಾಗದ ನೂತನ ಕಟ್ಟಡ ಉದ್ಘಾಟನೆ

Update: 2020-11-27 15:44 GMT

ಮಣಿಪಾಲ, ನ.27: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಿರ್ಮಿಸಿದ ಉಪ ವಿಭಾಗದ ನೂತನ ಕಟ್ಟಡವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬುಧವಾರ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಸದಸ್ಯೆ ಕಲ್ಪನಾ, ಉಡುಪಿ ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಉಡುಪಿ ಮೆಸ್ಕಾಂ ಅಧೀಕ್ಷಕ ನರಸಿಂಹ ಪಂಡಿತ್, ಕಾರ್ಯನಿರ್ವಾಹಕ ಇಂಜಿನಿಯರ್‌ಗಳಾದ ದಿನೇಶ್ ಉಪಾಧ್ಯಾಯ, ಮಾರ್ತಾಂಡಪ್ಪ ಮೊದಲಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕಟ್ಟಡದ ನಿರ್ಮಾಣ ಸೇವೆಗೈದ ಸಿವಿಲ್ ಇಜಿನಿಯರ್ ಲೋಕನಾಥ ಮಂಗಳೂರು, ಗುತ್ತಿಗೆದಾರ ರವಿಕುಮಾರ ಅವರನ್ನು ಗೌರವಿಸ ಲಾಯಿತು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಪುತ್ರನ್ ಸ್ವಾಗತಿಸಿದರು. ಗಿರೀಶ್ ಉಡುಪಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News