ಕಾಪು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಪ್ರಕಾಶ ಸುವರ್ಣ

Update: 2020-11-27 16:16 GMT

ಕಾಪು, ನ.27: ಕಾಪು ತಾಲೂಕು ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಪತ್ರಕರ್ತ, ಸಿನೆಮಾ ನಿರ್ದೇಶಕ ಪ್ರಕಾ ಸುವರ್ಣ ಕಟಪಾಡಿ ಆಯ್ಕೆಯಾಗಿ ದ್ದಾರೆ.

ಗೌರವಾಧ್ಯಕ್ಷರಾಗಿ ಕೆ.ಸತ್ಯೇಂದ್ರ ಪೈ ಕಟಪಾಡಿ, ಗೌರವ ಸಲಹೆಗಾರರಾಗಿ ಬಿ.ಪುಂಡಲೀಕ ಮರಾಠೆ ಶಿರ್ವ, ಪ್ರಧಾನ ಕಾರ್ಯದರ್ಶಿಯಾಗಿ ಭುವನೇಶ್ ಪ್ರಭು ಹಿರೇಬೆಟ್ಟು, ಜತೆ ಕಾರ್ಯದರ್ಶಿಯಾಗಿ ಪವಿತ್ರ ಶೆಟ್ಟಿ ಕಟಪಾಡಿ, ಕೋಶಾಧಿಕಾರಿಯಾಗಿ ಕೆ.ನಾಗೇಶ್ ಕಾಮತ್ ಕಟಪಾಡಿ, ಮಾಧ್ಯಮ ಕಾರ್ಯ ದರ್ಶಿಯಾಗಿ ರಾಕೇಶ್ ಕುಂಜೂರ್, ಸಂಘಟನಾ ಕಾರ್ಯದರ್ಶಿಯಾಗಿ ರಾಘವೇಂದ್ರ ಪ್ರಭು ಕರ್ವಾಲ್, ಸಂಚಾಲಕರಾಗಿ ದಯಾನಂದ ಡಿ., ಸಂಪಾದಕರಾಗಿ ದೀಪಕ್ ಕೆ.ಬೀರ, ಸಮಿತಿ ಸದಸ್ಯರಾಗಿ ಸುನೀಲ್ ಜಾನ್ ಡಿಸೋಜಾ, ಹರೀಶ್ ಹೇರೂರು, ಭಾಗ್ಯಲಕ್ಷ್ಮೀ ಉಪ್ಪೂರು, ಶಂಕರ್ ಶೇರಿಗಾರ್ ಮಟ್ಟು, ಕಾವ್ಯ ಪೈ ಕುತ್ಯಾರು, ಗೀತಾ ಆಚಾರ್ಯ ಕಾಪು, ಲಕ್ಷ್ಮಣ್ ಟಿ ಕಟಪಾಡಿ ಇವರನ್ನು ಉಡುಪಿ ಜಿಲ್ಲಾ ಪರಿಷತ್ ಅಧ್ಯಕ್ಷ ಗಣೇಶ್ ಗಂಗೊಳ್ಳಿ ಶಿಫಾರಸ್ಸಿನ ಮೇರೆಗೆ ರಾಜ್ಯಾಧ್ಯಕ್ಷ ಡಾ.ಬಾಲಾಜಿ ಎಸ್. ಆಯ್ಕೆಮಾಡಿದ್ದಾರೆ ಎಂದು ವಿಭಾಗೀಯ ಸಂಚಾಲಕಿ ಡಾ.ಭಾರತಿ ಮರವಂತೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News