ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಬ್ಯಾನರ್: ವೇದಿಕೆ ಏರಲು ಕಾಂಗ್ರೆಸ್ ಜನಪ್ರತಿನಿಧಿಗಳ ನಿರಾಕರಣೆ

Update: 2020-11-27 16:28 GMT

ಗುಂಡ್ಲುಪೇಟೆ, ನ.27: ತಾಲೂಕಿನ ಬೇಗೂರು ಹೋಬಳಿಯ ಐದು ಕೆರೆಗಳಿಗೆ ನೀರು ತುಂಬಿಸುವ ಸರ್ಕಾರದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇರುವ ಬ್ಯಾನರ್ ಬಳಸಲಾಗಿದೆ ಎಂದು ಕಾಂಗ್ರೆಸ್ ಜನಪ್ರತಿನಿಧಿಗಳು ವೇದಿಕೆ ಏರಲು ನಿರಾಕರಿಸಿದ ಪ್ರಸಂಗ ನಡೆಯಿತು.

ತಾಲೂಕಿನ ರಾಘವಾಪುರ ಕೆರೆ ಆವರಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ವಿಶ್ವನಾಥ್, ಉಪಾಧ್ಯಕ್ಷೆ ಶಶಿಕಲಾ, ತಾಲೂಕು ಪಂಚಾಯತಿ ಅಧ್ಯಕ್ಷ ಮಧುಶಂಕರ್, ಉಪಾಧ್ಯಕ್ಷೆ ಸುಮಿತ್ರಾ ಮಹೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ವೇದಿಕೆ ಏರಲು ನಿರಾಕರಿಸಿ ಹೊರಗೆ ನಿಲ್ಲುವುದಾಗಿ ತಿಳಿಸಿದಾಗ ಬ್ಯಾನರ್ ತೆಗೆದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಮತ್ತು ಶಾಸಕ ಸಿ.ಎಸ್.ನಿರಂಜನ ಕುಮಾರ್ ಎದುರಲ್ಲೆ ಬ್ಯಾನರ್ ತೆಗೆಯಲಾಯಿತು. 

ತಾಲೂಕು ಪಂಚಾಯತ್ ಅಧ್ಯಕ್ಷ ಮಧುಂಕರ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದ ಚಿಹ್ನೆ ಇರುವ ಬ್ಯಾನರ್ ಹಾಕಿರುವುದು ಖಂಡನೀಯ ಎಂದು ವಿರೋಧ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News