ಗಮನ ಬೇರೆಡೆ ಸೆಳೆದು 3 ಲಕ್ಷ ರೂ. ನಗದು ದೋಚಿದರು: ಕೃತ್ಯ ಸಿಸಿಟಿವಿಯಲ್ಲಿ ಸೆರೆ

Update: 2020-11-27 17:09 GMT

ಬೆಂಗಳೂರು, ನ.27: ಗಮನ ಬೇರೆಡೆ ಸೆಳೆದು 3 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗೆಳೆಯರ ಬಳಗದ ಜನತಾ ಕೋಪರೇಟಿವ್ ಬ್ಯಾಂಕ್‍ನಲ್ಲಿ ಭಾಸ್ಕರ್ ಎಂಬವರು ನಗದು ಪಡೆದುಕೊಂಡು ಹೊರಬಂದಿದ್ದು,  ಬ್ಯಾಂಕ್ ಮುಂದೆ ಭಾಸ್ಕರ್ ಬರುತ್ತಿದ್ದಂತೆ ಅಲ್ಲಿಗೆ ಬಂದ ದುಷ್ಕರ್ಮಿಯೊಬ್ಬ, ನಿಮ್ಮ ಹಣ ಕೆಳಗೆ ಬಿದಿದ್ದೆ ಎಂದು ಹೇಳಿ ಗಮನ ಬೇರೆಡೆ ಸೆಳೆದಿದ್ದಾರೆ.

ಆಗ ಭಾಸ್ಕರ್, ಕೆಳಗೆ ಬಿದ್ದ ಹಣ ತೆಗೆದುಕೊಳ್ಳಲು ಮುಂದಾದರು. ಈ ವೇಳೆ ಮತ್ತೊಬ್ಬ ದುಷ್ಕರ್ಮಿ ಬೈಕ್ ಮೇಲಿದ್ದ ಹಣದ ಬ್ಯಾಗ್ ತೆಗೆದುಕೊಂಡು ಅಲ್ಲಿಂದ ಪರಾರಿಯಾಗಿದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News