ಮೈಸೂರು ರೇಸ್ ಕ್ಲಬ್ ಜಾಗದ ಗುತ್ತಿಗೆ ಅವಧಿ ವಿಸ್ತರಣೆ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-11-27 17:09 GMT

ಬೆಂಗಳೂರು, ನ.27: ಮೈಸೂರು ನಗರದ ಕುರುಬರಹಳ್ಳಿ ಗ್ರಾಮದಲ್ಲಿ ಮೈಸೂರು ರೇಸ್ ಕ್ಲಬ್‍ಗೆ ನೀಡಿದ್ದ 140 ಎಕರೆ ಜಾಗದ ಗುತ್ತಿಗೆ ಅವಧಿಯನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ವಕೀಲ ಎಸ್.ಉಮಾಪತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ವರಮಾನದ ಶೇ.2ರಷ್ಟು ಬಾಡಿಗೆ ನಿಗದಿ ಮಾಡುವ ಮೂಲಕ ಸರಕಾರಕ್ಕೆ ನಷ್ಟ ಉಂಟುಮಾಡಲಾಗಿದೆ. ರೇಸ್ ಕ್ಲಬ್‍ಗೆ ಜಾಗ ನೀಡುವುದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ. ಪ್ರಭಾವಿಗಳಿಗಷ್ಟೇ ಇದರಿಂದ ಲಾಭವಾಗಿದೆ ಎಂದು ಅರ್ಜಿಯಲ್ಲಿ ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News