ಪುತ್ತೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2020-11-28 05:36 GMT

ಪುತ್ತೂರು, ನ.28: ಬೈಕ್ ಮತ್ತು ಜೀಪೊಂದರ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಪುತ್ತೂರು ನಗರದ ಬೈಪಾಸ್ ತೆಂಕಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಪರ್ಲಡ್ಕ ನಿವಾಸಿ ಹಸಿಮೀನು ವ್ಯಾಪಾರ ನಡೆಸುತ್ತಿರುವ ಹಂಝ ಹಾಜಿ ಎಂಬವರ ಪುತ್ರ ಮುಹಮ್ಮದ್ ಹಾಶಿಂ(20) ಮೃತಪಟ್ಟ ಯುವಕ. ಹಾಶಿಂ ಚಲಾಯಿಸುತ್ತಿದ್ದ ಬೈಕ್ ಮತ್ತು ಜೀಪ್ ನಡುವೆ ಢಿಕ್ಕಿ ಸಂಭವಿಸಿದ್ದು, ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಹಾಶಿಂ ಗಂಭೀರ ಗಾಯಗೊಂಡಿದ್ದರು. ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪುತ್ತೂರು ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಂದು ಹಸಿಮೀನು ವ್ಯಾಪಾರ ಬಂದ್
ಪುತ್ತೂರಿನ ಹೆಸರಾಂತ ಮೀನು ವ್ಯಾಪಾರಿ ಹಂಝ ಹಾಜಿ ಅವರ ಪುತ್ರರಾಗಿರುವ ಮುಹಮ್ಮದ್ ಹಾಸಿಂ ಅವರ ಸಾವಿಗೆ ಸಂತಾಪ ಸೂಚಕವಾಗಿ ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಶನಿವಾರ ಪುತ್ತೂರಿನಲ್ಲಿ ಹಸಿಮೀನು ವ್ಯಾಪಾರ ಬಂದ್ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News