ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್ ದಾಖಲು

Update: 2020-11-28 04:53 GMT

ಬೆಂಗಳೂರು, ನ.28: ಆತ್ಮಹತ್ಯೆಗೆ ಯತ್ನಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ವಿರುದ್ಧ  ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರವಾಗಿರುವ ಹಿನ್ನೆಲೆಯಲ್ಲಿ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309  ಅಡಿ ಎನ್.ಆರ್. ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News