ಸಂತೋಷ್ ಆತ್ಮಹತ್ಯೆಗೆ ಕಾರಣವಾಗಿರುವ ವಿಡಿಯೊ ಡಿಕೆಶಿ ನೀಡಲಿ: ಬಸವರಾಜ ಬೊಮ್ಮಾಯಿ

Update: 2020-11-28 12:23 GMT

ರಾಯಚೂರು, ನ.28: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ವಿಡಿಯೊ ಕಾರಣವಾಗಿದ್ದರೆ, ಡಿ.ಕೆ.ಶಿವಕುಮಾರ್ ಆ ವಿಡಿಯೊ ನೀಡಲಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವ ಪೂರ್ವ ಸುದ್ದಿಗಾರರೊಂದಿಗೆ ಮಾತನಾಡಿದರು.

ಆತ್ಮಹತ್ಯೆ ಪ್ರಕರಣ ಸಂಬಂಧ ಸದಾಶಿವ ನಗರ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಘಟನೆ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಲಾಗುವುದು. ಅಲ್ಲದೆ, ಡಿಕೆ ಶಿವಕುಮಾರ್ ಅವರು ವಿಡಿಯೊ ಒದಗಿಸುವ ಕೆಲಸ ಮಾಡಲಿ. ಆ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಪೊಲೀಸ್ ಠಾಣೆಗಳು ಮತ್ತು ವ್ಯವಸ್ಥೆಯ ಆಧುನೀಕರಣ ಮಾಡುವ ಮೊದಲ ಚರಣ ಮುಗಿದಿದೆ. ಇನ್ನೂ ಕೆಲವು ಬಾಕಿ ಉಳಿದಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಆಧುನೀಕರಣ ಪ್ರಕ್ರಿಯೆ ಮುಂದುರಿಸಲಾಗುವುದು. ಇದಕ್ಕಾಗಿ ಕೆಕೆಆರ್‍ಡಿಬಿಯಿಂದಲೂ ಈ ಭಾಗದಲ್ಲಿ ಅನುಕೂಲ ಕಲ್ಪಿಸಲು ಅನುದಾನ ಪಡೆಯಲಾಗುವುದು ಎಂದು ಅವರು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News