ಗೋಡೆ ಬರಹ ಪ್ರಕರಣ : ಆರೋಪಿಗಳ ಪತ್ತೆಗೆ ದ.ಕ. ಜಿಲ್ಲಾ ಕಾಂಗ್ರೆಸ್ ಆಗ್ರಹ

Update: 2020-11-28 15:55 GMT

ಮಂಗಳೂರು, ನ. 28: ದೇಶ ವಿರೋಧಿ ಕೃತ್ಯಗಳನ್ನು ಯಾರೇ ನಡೆಸಿದರೂ ಅವರನ್ನು ಪತ್ತೆ ಹಚ್ಚಿ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಕುಮಾರ್ ಸರಕಾರವನ್ನು ಆಗ್ರಹಿಸಿದ್ದಾರೆ.

ಗೋಡೆ ಬರಹಗಳ ಮೂಲಕ ಸಮಾಜ ಒಡೆಯುವ ಕೋಮು ಶಕ್ತಿಗಳ ಈ ಕೃತ್ಯವನ್ನು ಜಿಲ್ಲಾ ಕಾಂಗ್ರೆಸ್ ಕಟುವಾದ ಶಬ್ದಗಳಲ್ಲಿ ಖಂಡಿಸುತ್ತದೆ. ಇದು ಬಿಜೆಪಿ ಸರಕಾರದ ವೈಫಲ್ಯದ ಪರಿಣಾಮವಾಗಿದೆ. ಪೊಲೀಸರು ಈ ಸಂದರ್ಭದಲ್ಲಿ ಇಂತಹ ದೇಶ ದ್ರೋಹಿಗಳನ್ನು ಮಟ್ಟಹಾಕಬೇಕು ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News