ಕಡ್ಡಾಯ ವರ್ಗಾವಣೆಗೊಳಗಾದವರಿಗೆ ಪ್ರಥಮ ಆದ್ಯತೆ ನೀಡಲು ಸುರೇಶ್ ಕುಮಾರ್ ಸೂಚನೆ

Update: 2020-11-28 16:56 GMT

ಬೆಂಗಳೂರು, ನ.28: 2017-18ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಗೆ ಒಳಗಾದ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ಪ್ರಸಕ್ತ ಸಾಲಿನ ವರ್ಗಾವಣೆಯಲ್ಲಿ ಎಲ್ಲ ವಲಯಗಳಲ್ಲಿ ಪ್ರಥಮ ಆದ್ಯತೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಪಿಯು ಇಲಾಖೆಯ ನಿರ್ದೇಶಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸೂಚಿಸಿದ್ದಾರೆ.

ಕಡ್ಡಾಯ ವರ್ಗಾವಣೆಯಾದ ಉಪನ್ಯಾಸಕರಿಗೆ ಅವಕಾಶ ಕಲ್ಪಿಸಿದ ಬಳಿಕ ಉಳಿದ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕು ಎಂದೂ ಸಚಿವರು ನಿರ್ದೇಶನ ನೀಡಿದ್ದಾರೆ. 2017–18ನೇ ಸಾಲಿನಲ್ಲಿ ಹೆಚ್ಚುವರಿ ಉಪನ್ಯಾಸಕರ ವರ್ಗಾವಣೆಯಡಿಯಲ್ಲಿ ವರ್ಗಾವಣೆಗೊಂಡಿದ್ದ ಉಪನ್ಯಾಸಕರಿಗೆ ಎರಡನೇ ಆದ್ಯತೆಯಲ್ಲಿ ಅವಕಾಶ ಕಲ್ಪಿಸಬೇಕು ಎಂದು ಅವರ ಸೂಚನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News