ಕೋಟ : ಕಾರು ಢಿಕ್ಕಿ; ಸ್ಕೂಟರ್ ಸವಾರೆ ಮೃತ್ಯು, ಸಹಸವಾರೆ ಗಂಭೀರ ಗಾಯ

Update: 2020-11-28 17:15 GMT

ಕೋಟ : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ ಮೃತಪಟ್ಟು, ಸಹಸವಾರೆ ಗಂಭೀರವಾಗಿ ಗಾಯಗೊಂಡ ಘಟನೆ ಕೋಟದ ರಾಷ್ಟ್ರೀಯ ಹೆದ್ದಾರಿ ಕೃಷ್ಣಭವನ ಹೋಟೆಲ್ ಎದುರುಗಡೆ ಶನಿವಾರ ನಡೆದಿದೆ.

ಮೃತರನ್ನು ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಎಂದು‌ ಗುರುತಿಸಲಾಗಿದೆ. ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25) ಎಂಬವರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ  ಹಿಂದಿನಿಂದ ಬಂದ ಫಾರ್ಚುನರ್ ಕಾರು ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಅಪಘಾತ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಕಾರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News