ರೈತರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ: ಸಂಜಯ್ ರಾವತ್
Update: 2020-11-29 06:42 GMT
ಹೊಸದಿಲ್ಲಿ: "ರಾಷ್ಟ್ರ ರಾಜಧಾನಿ ದಿಲ್ಲಿಯೊಳಗೆ ಪ್ರವೇಶಿಸದಂತೆ ರೈತರನ್ನು ತಡೆದ ರೀತಿಯು ಅವರು ದೇಶದ ಪ್ರಜೆಗಳೇ ಅಲ್ಲ ಎಂಬ ರೀತಿ ಕಾಣುತ್ತಿತ್ತು. ರೈತರನ್ನು ಭಯೋತ್ಪಾದಕರಂತೆ ನಡೆಸಿಕೊಳ್ಳಲಾಗುತ್ತಿದೆ. ಪ್ರತಿಭಟನೆಯಲ್ಲಿದ್ದ ಹೆಚ್ಚಿನ ಸಂಖ್ಯೆಯ ರೈತರು ಪಂಜಾಬ್ ಹಾಗೂ ಹರ್ಯಾಣದಿಂದ ಬಂದವರಾಗಿದ್ದು, ಅವರಲ್ಲಿ ಸಿಖ್ಖರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ರೈತರನ್ನು ಖಲಿಸ್ತಾನಿಗಳು ಎಂದು ಕರೆಯುವುದು ರೈತರಿಗೆ ಮಾಡುವ ಅವಮಾನವಾಗಿದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರೈತರ ಪ್ರತಿಭಟನೆಗೆ ಖಲಿಸ್ತಾನ ಉಗ್ರ ಸಂಘಟನೆ ನಂಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಹರ್ಯಾಣದ ಮುಖ್ಯಮಂತ್ರಿ ಮನೋಹರ್ ಖಟ್ಟರ್ ಈ ಕುರಿತು ತನಿಖೆ ನಡೆಸಲಾಗುವುದು ಎಂದು ಹೇಳಿದ್ದರು.