ಸದ್ಯದಲ್ಲೇ ಸಂಪುಟ ವಿಸ್ತರಣೆ : ಮುಖ್ಯಮಂತ್ರಿ ಯಡಿಯೂರಪ್ಪ
Update: 2020-11-29 09:32 GMT
ಶಿವಮೊಗ್ಗ : ಮಹದಾಯಿ ನದಿ ನೀರು ಹಂಚಿಕೆ ಕುರಿತು ಗೋವಾ ಮುಖ್ಯಮಂತ್ರಿ ಜೊತೆ ಮಾತನಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದ ಹೆಲಿಪ್ಯಾಡ್ ನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಹದಾಯಿ ನದಿ ನೀರಿನ ಕುರಿತು ಗೋವಾ ಮುಖ್ಯಮಂತ್ರಿಗಳು ಮತ್ತೆ ಕ್ಯಾತೆ ತೆಗೆದಿದ್ದು ನೀರು ಹಂಚಿಕೆಯಲ್ಲಿ ಕರ್ನಾಟಕಕ್ಕೆ ನೀಡಬಾರದು ಎಂದು ಗೋವಾ ಸಿಎಂ ಹೇಳಿದ್ದಾರೆ. ಗೋವಾ ಸಿಎಂರನ್ನ ದೆಹಲಿಗೆ ಕರೆಯಿಸಿ ಮಾತನಾಡುವುದಾಗಿ ತಿಳಿಸಿದರು. ಸಚಿವ ಸಂಪುಟ ವಿಸ್ತರಣೆಯನ್ನ ಸದ್ಯದಲ್ಲಿಯೇ ಮಾಡುವುದಾಗಿ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಎರಡನೇ ಹಂತದ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ. ರಾತ್ರಿಯೂ ವಿಮಾನಗಳು ಶಿವಮೊಗ್ಗದಲ್ಲಿ ಲ್ಯಾಂಡಿಂಗ್ ಆಗಲಿವೆ ಎಂದು ತಿಳಿಸಿದರು.