ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ: ಎಂ.ಟಿ.ಬಿ.ನಾಗರಾಜ್

Update: 2020-11-29 11:17 GMT

ಬಾಗಲಕೋಟೆ, ನ. 29: ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ಇನ್ನೂ ಎರಡೂ ವರೆಗೆ ವರ್ಷ ಬಿಎಸ್‍ವೈ ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರೆಂಬ ಯಾವುದೇ ಭಿನ್ನ-ಬೇಧವಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಇದ್ದೇವೆ. ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೂ ನಮ್ಮ ಬಗ್ಗೆ ಪ್ರೀತಿ ಜಾಸ್ತಿ. ಹೀಗಾಗಿ ಅವರು ಕೆಲ ಹೇಳಿಕೆಗಳನ್ನು ನೀಡುತ್ತಿರುತ್ತಾರೆ ಎಂದು ಹೇಳಿದರು.

ನಾವು ಕೆಲವರೆಲ್ಲ ಸೇರಿ ಸಭೆ ನಡೆಸಿದ್ದು, ವಿಶೇಷವೇನು ಇಲ್ಲ. ಅಲ್ಲಿ ಸರಕಾರದ ವಿಚಾರ ಕುರಿತು ಯಾವುದೇ ಸಮಾಲೋಚನೆ ನಡೆಸಿಲ್ಲ. ನಮ್ಮನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಿತ್ತು. ಅದು ವಿಳಂಬವಾಗುತ್ತಿದೆ. ಈ ಕುರಿತು ಸಮಾಲೋಚನೆ ನಡೆಸಿದ್ದೇವೆ ಎಂದು ಸ್ಪಷ್ಟಣೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News